ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.
TSK
TSK · 1 ಪೂರ್ವಕಾಲವೃತ್ತಾ 10:14
مراجع Treasury of Scripture Knowledge في ಕನ್ನಡ IRV.
ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು.
¶ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.
ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,
ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.
ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.
“ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”