¶ ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
TSK
TSK · 1 ಪೂರ್ವಕಾಲವೃತ್ತಾ 11:2
مراجع Treasury of Scripture Knowledge في ಕನ್ನಡ IRV.
ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.
ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.
ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ, ‘ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು. ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದೆನು.
ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.
ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.
‹ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.›