ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
TSK
TSK · 1 ಪೂರ್ವಕಾಲವೃತ್ತಾ 13:6
مراجع Treasury of Scripture Knowledge في ಕನ್ನಡ IRV.
ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.
¶ ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಆ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು.
ಕಿರ್ಯಾತ್ಯಾರೀಮ್ ಅನಿಸಿಕೊಳ್ಳುವ ಕಿರ್ಯಾತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳು ಗ್ರಾಮಗಳು.
ದೇವರ ಮಂಜೂಷವನ್ನು ತರುವುದಕ್ಕಾಗಿ ಯೆಹೂದ ದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾಗಿತ್ತು.
ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.