TSK

TSK · 1 ಪೂರ್ವಕಾಲವೃತ್ತಾ 16:12

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.

“ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.

ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.

ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.

ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.

ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.

ಯೆಹೋವನೇ, ನೀನು ನೀತಿಸ್ವರೂಪನು, ನಿನ್ನ ವಿಧಿಗಳು ನ್ಯಾಯವಾಗಿವೆ.

ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.