‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.
TSK
TSK · 1 ಪೂರ್ವಕಾಲವೃತ್ತಾ 16:36
مراجع Treasury of Scripture Knowledge في ಕನ್ನಡ IRV.
“ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.
ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.
ಇಸ್ರಾಯೇಲ್ ದೇವರಾದ ಯೆಹೋವನಿಗೆ, ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ “ಆಮೆನ್” ಎನ್ನಲಿ. ಯೆಹೋವನಿಗೆ ಸ್ತೋತ್ರ!
ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ?
¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,