ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.
TSK
TSK · 1 ಪೂರ್ವಕಾಲವೃತ್ತಾ 17:6
مراجع Treasury of Scripture Knowledge في ಕನ್ನಡ IRV.
¶ ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.
ಆಗ ಯೆಹೋವನು ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸುವುದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದನು.
ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.
ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.
ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.
ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.
ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
¶ ‹“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ,›‹ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು›‹ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,›