TSK

TSK · 1 ಪೂರ್ವಕಾಲವೃತ್ತಾ 18:17

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.

ಆಗ ಅವನು ಯೋವಾಬನ ಸೈನಿಕರನ್ನೂ, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕೋಸ್ಕರ ಯೆರೂಸಲೇಮಿನಿಂದ ಹೊರಟರು.

ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ?

ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್ ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ, ಕೆರೇತ್ಯ ಮತ್ತು ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.

ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ,