ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.
TSK
TSK · 1 ಪೂರ್ವಕಾಲವೃತ್ತಾ 21:15
مراجع Treasury of Scripture Knowledge في ಕನ್ನಡ IRV.
ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.
ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.
ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
¶ “ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.
ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು.
ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.
ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.
ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, ‹“ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.›