¶ ಯೆಹೂದ ಕುಲದವನೂ ಜೆರಹನ ಗೋತ್ರದವನೂ, ಜಬ್ದೀಯ ಕುಟುಂಬದವನೂ, ಕರ್ಮೀಯ ಮಗನೂ ಆದ ಆಕಾನನು ಯೆಹೋವನಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡದ್ದರಿಂದ ಇಸ್ರಾಯೇಲ್ಯರೆಲ್ಲರು ದ್ರೋಹಿಗಳಾದರು. ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು.
TSK
TSK · 1 ಪೂರ್ವಕಾಲವೃತ್ತಾ 21:7
مراجع Treasury of Scripture Knowledge في ಕನ್ನಡ IRV.
ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.
ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.
ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.
¶ ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.
¶ ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.