¶ ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.
TSK
TSK · 1 ಪೂರ್ವಕಾಲವೃತ್ತಾ 22:19
مراجع Treasury of Scripture Knowledge في ಕನ್ನಡ IRV.
“ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.
ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು.
ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.
ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿರಿಸಿದರು.
ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.
ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.
ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.
ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ.
ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.