TSK

TSK · 1 ಪೂರ್ವಕಾಲವೃತ್ತಾ 22:9

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಆಗ ಅವನು, “ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರೆಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಅದಿರಲಿ, ಒಂದು ಬಿನ್ನಹವಿದೆ.

ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.

“ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.

ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.

ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.

ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.

ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.

ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.

‘ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವುದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು’” ಇದು ಸೇನಾಧೀಶ್ವರನಾದ ಯೆಹೋವನ ನುಡಿ.