¶ ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.
TSK
TSK · 1 ಪೂರ್ವಕಾಲವೃತ್ತಾ 23:13
مراجع Treasury of Scripture Knowledge في ಕನ್ನಡ IRV.
ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.
ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.
¶ “ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.
¶ ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.
“ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?
¶ “ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.
¶ ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರೂ, ಹೆಬ್ರೋನ್ ಗೋತ್ರದವರೂ, ಉಜ್ಜೀಯೇಲ್ ಗೋತ್ರದವರೂ ಇದ್ದರು.
¶ ಮೋಶೆ ಕೋರಹನಿಗೆ, “ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.
ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.
ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.
¶ ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.
ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.
ಸಮುವೇಲನು ಎಲ್ಕಾನನ ಮಗ. ಇವನು ಯೆರೋಹಾಮನ ಮಗ, ಯೆರೋಹಾಮನು ಎಲೀಯೇಲನ ಮಗ, ಇವನು ತೋಹನ ಮಗ.
ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.
ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.
¶ ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,
ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.