TSK

TSK · 1 ಪೂರ್ವಕಾಲವೃತ್ತಾ 25:1

مراجع Treasury of Scripture Knowledge في ಕನ್ನಡ IRV.

العودة إلى المقطع

ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.

ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.

¶ ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ.

¶ ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ, ಮೆರಾರಿಯನೂ ಆದ ಏತಾನನು ಮೂರನೆಯವನು. ಇವನು ಕೀಷೀಯ ಮಗ, ಇವನು ಅಬ್ದೀಯನ ಮಗ, ಇವನು ಮಲ್ಲೂಕನ ಮಗ.

ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.

ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನರು ಗಟ್ಟಿಯಾಗಿ ಕಂಚಿನ ತಾಳಗಳನ್ನು ಬಾರಿಸಿವವರು.

¶ ಯೆಹೋವನ ಮಂಜೂಷದ ಮುಂದೆ ದೇವರಾಧನೆ ನಡಿಸುವುದಕ್ಕೋಸ್ಕರ ದಾವೀದನು ಕೆಲವು ಲೇವಿಯರನ್ನು ನೇಮಿಸಿದನು. ಇಸ್ರಾಯೇಲಿನ ದೇವರಾದ ಯೆಹೋವನನ್ನು ಸ್ತುತಿಸುವುದೂ, ಹಾಡಿ ಹರಸುವುದೂ ಅವರ ಕರ್ತವ್ಯವಾಗಿತ್ತು.

ಅವನು ಇಸ್ರಾಯೇಲರ ಎಲ್ಲಾ ಅಧಿಪತಿಗಳನ್ನೂ, ಯಾಜಕರನ್ನೂ ಮತ್ತು ಲೇವಿಯರನ್ನೂ ತನ್ನ ಬಳಿಯಲ್ಲಿ ಒಟ್ಟುಗೂಡಿಸಿದನು.

ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.

ಚೀಟಿನ ಪ್ರಕಾರವಾಗಿ, ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು.

ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.

ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.

ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.

¶ ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.

ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.

ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:

ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.

ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.

ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.

ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.

ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,