ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.
TSK
TSK · 1 ಪೂರ್ವಕಾಲವೃತ್ತಾ 29:12
مراجع Treasury of Scripture Knowledge في ಕನ್ನಡ IRV.
ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.
ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು.
ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.
ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.
ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ.
ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನು ಸಮಸ್ತವನ್ನೂ ಆಳುತ್ತಾನೆ.
ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನು, ನನ್ನ ಬೆರಳುಗಳಿಗೆ ಕಾಳಗವನ್ನು ಕಲಿಸಿದ್ದಾನೆ.
ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.
ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.
ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.
ಯೇಸು ಅವರ ಹತ್ತಿರಕ್ಕೆ ಬಂದು, ‹“ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.›
ಅದಕ್ಕೆ ಯೇಸು, ‹“ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ”› ಎಂದು ಉತ್ತರ ಕೊಟ್ಟನು.
ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
“ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೇ ಇದ್ದಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.