TSK

TSK · 1 ಪೂರ್ವಕಾಲವೃತ್ತಾ 29:22

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.

ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.

ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ” ಎಂದಳು.

ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.

ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.

ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.

¶ ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.

ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.

ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.