ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.
TSK
TSK · 1 ಪೂರ್ವಕಾಲವೃತ್ತಾ 29:9
مراجع Treasury of Scripture Knowledge في ಕನ್ನಡ IRV.
ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ” ಎಂಬುದೇ.
ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.
ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.
ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.
‹ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ.›
ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಿಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು.
ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.
¶ ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.
¶ ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.