ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
TSK
TSK · 1 ಪೂರ್ವಕಾಲವೃತ್ತಾ 4:10
مراجع Treasury of Scripture Knowledge في ಕನ್ನಡ IRV.
¶ ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,
ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.
¶ ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.
ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.
¶ ಮನಸ್ಸೆಯವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ವಾಸವಾಗಿದ್ದವರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ದೃಢಮಾಡಿಕೊಂಡರು.
ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.
ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;
“ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.
ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.
ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.
ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.
ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.
ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು.
ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.
ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
¶ ‹“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;›
‹“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.›
ಯೇಸು ಮೂರನೆಯ ಸಾರಿ, ‹“ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?”› ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು ‹“ನನ್ನ ಕುರಿಗಳನ್ನು ಮೇಯಿಸು”› ಎಂದನು.
ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.
ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
¶ ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.
¶ ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ
ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.