TSK

TSK · 1 ಪೂರ್ವಕಾಲವೃತ್ತಾ 9:11

مراجع Treasury of Scripture Knowledge في ಕನ್ನಡ IRV.

العودة إلى المقطع

ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.

ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು” ಎಂದನು.

ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.

ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.

¶ ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು.

ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.