¶ ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು
TSK
TSK · 1 ಯೋಹಾನನು 1:9
مراجع Treasury of Scripture Knowledge في ಕನ್ನಡ IRV.
ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ವಿಜ್ಞಾಪನೆ ಮಾಡಿ,
ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.
ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.
ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.
ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.
ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!
ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.
ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.
ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.