TSK

TSK · 1 ಯೋಹಾನನು 2:1

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”

‹ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ”› ಅಂದನು.

¶ ಯೇಸು ಅವರಿಗೆ, ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.›

‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.

‹ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.›

ಯೇಸು ಅವನಿಗೆ, ‹“ನಾನೇ ಮಾರ್ಗವೂ, ಸತ್ಯವೂ ಮತ್ತು›‹ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.›

¶ ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.

ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?

ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.

ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.

“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.

¶ ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.

ಆತನಾದರೋ ಸದಾಕಾಲ ಜೀವಿಸುವುದರಿಂದ ಆತನ ಯಾಜಕತ್ವವನ್ನು ಶಾಶ್ವತವಾದ್ದದು.

ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.

ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.

ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.

¶ ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.

ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.

ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.

ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.