ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.
TSK
TSK · 1 ಯೋಹಾನನು 2:20
مراجع Treasury of Scripture Knowledge في ಕನ್ನಡ IRV.
ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
ನನ್ನ ದೇವರೇ, ನಿನ್ನ ಸತ್ಯತೆಯನ್ನು ಸ್ಮರಿಸುವೆನು; ಸ್ವರಮಂಡಲದಿಂದ ನಿನ್ನನ್ನು ಸಂಕೀರ್ತಿಸುವೆನು. ಇಸ್ರಾಯೇಲರ ಪರಿಶುದ್ಧ ದೇವರು, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಭಜಿಸುವೆನು.
ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
‹“ಕರ್ತನ ಆತ್ಮವು ನನ್ನ ಮೇಲೆ ಅದೆ,› ‹ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು.› ‹ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ,› ‹ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ› ‹ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ›
‹ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.›
‹ಆದರೆ›‹ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.›
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ.
ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.
ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.
ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.