ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
TSK
TSK · 1 ಯೋಹಾನನು 3:8
مراجع Treasury of Scripture Knowledge في ಕನ್ನಡ IRV.
‹ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆ›‹ರಾಜ್ಯದ ಮಕ್ಕಳು.›
ಯೇಸು ಅವರಿಗೆ, ‹“ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.›
‹ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ.›‹ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು›
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.
ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.