¶ ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.
TSK
TSK · 1 ಯೋಹಾನನು 5:16
مراجع Treasury of Scripture Knowledge في ಕನ್ನಡ IRV.
¶ ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.
ಆಗ ಮೋಶೆ ಯೆಹೋವನಿಗೆ, “ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ” ಎಂದು ಮೊರೆಯಿಟ್ಟನು.
ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
¶ ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.
ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.
ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.
ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.
¶ ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
¶ “‘ನಾನು ದೇಶವನ್ನು ಹಾಳು ಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವುದಕ್ಕೂ, ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.
‹ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.›
‹ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.›
¶ ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.
¶ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
¶ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.