ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.
TSK
TSK · 1 ಯೋಹಾನನು 5:6
مراجع Treasury of Scripture Knowledge في ಕನ್ನಡ IRV.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
‹ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ›‹ಒಡಂಬಡಿಕೆಯ ರಕ್ತ.›
ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, ‹“ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.›
ಅದಕ್ಕೆ ಯೇಸು ‹“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.›
‹ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು›‹ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು”› ಎಂದು ಹೇಳಿದನು.
‹ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು”› ಎಂದು ಕೂಗಿ ಹೇಳಿದನು.
‹ಆ ಸಹಾಯಕನು ಯಾರೆಂದರೆ›‹ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.›
‹ಆದರೆ›‹ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.›
¶ ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.
ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ.
ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?
ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.