¶ ಅದಕ್ಕಾತನು, “ನೀನು ಬೆತ್ತಲೆಯಾಗಿದ್ದೀಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
TSK
TSK · 1 ಅರಸುಗಳು 21:19
مراجع Treasury of Scripture Knowledge في ಕನ್ನಡ IRV.
ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.
ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.
¶ ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.
ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು.
ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.
ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.
ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ
¶ ಆಗ ಪ್ರವಾದಿಯಾದ ಯೆರೆಮೀಯನು ಈ ಮಾತುಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.
‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;
‹ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.›