¶ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.
TSK
TSK · 1 ಅರಸುಗಳು 21:3
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು.
ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು.
ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.
ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.
ನೀವು ನ್ಯಾಯವಂತರೆಂದು ನಾನು ಒಪ್ಪುವುದು ಅಸಾಧ್ಯ. ಸಾಯುವ ತನಕ ನನ್ನ ಯಥಾರ್ಥತ್ವವನ್ನು ಬಿಡುವುದಿಲ್ಲ.
ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.
ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.