¶ ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.
TSK
TSK · 1 ಪೇತ್ರನು 1:17
مراجع Treasury of Scripture Knowledge في ಕನ್ನಡ IRV.
ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.
ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.
ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.
“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.
‹ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,›
ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು.
ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು, ಶಾಂತಿಯು ಉಂಟಾಗಲಿ.
¶ ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.
¶ ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.
¶ ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,
¶ ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
¶ ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.
ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.