¶ ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು
TSK
TSK · 1 ಪೇತ್ರನು 2:1
مراجع Treasury of Scripture Knowledge في ಕನ್ನಡ IRV.
ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.
ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.
ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.
ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸಬೇಡ.
ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.
¶ “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?
‹ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,›
‹ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.›
‹ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.›
¶ ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, ‹“ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.›
ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.
ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ.
ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.
ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.
ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ.
ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.
¶ ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?
ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.
ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.
ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.
ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.