ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.
TSK
TSK · 1 ಪೇತ್ರನು 2:12
مراجع Treasury of Scripture Knowledge في ಕನ್ನಡ IRV.
ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.
ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
‹ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.›
‹ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ›‹ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?›
¶ ‹“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.›
¶ “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.
¶ ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.
ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,
ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.
ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.
ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.
ಹೀಗಿದ್ದರೆ ನೀವು ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ.
ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
¶ ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.