ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು.
TSK
TSK · 1 ಪೇತ್ರನು 2:5
مراجع Treasury of Scripture Knowledge في ಕನ್ನಡ IRV.
ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.
ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು” ಎಂದು ಯೆಹೋವನು ಹೇಳುತ್ತಾನೆ.
“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
¶ ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.
ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.
ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.
ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.
ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.
ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”