ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.
TSK
TSK · 1 ಪೇತ್ರನು 2:6
مراجع Treasury of Scripture Knowledge في ಕನ್ನಡ IRV.
ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.
ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.
ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”
“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.
¶ ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.
“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.
ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.
ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.