ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವವನಷ್ಟೆ, ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ.
TSK
TSK · 1 ಪೇತ್ರನು 2:8
مراجع Treasury of Scripture Knowledge في ಕನ್ನಡ IRV.
“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.
ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.
ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.