ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.
TSK
TSK · 1 ಪೇತ್ರನು 3:22
مراجع Treasury of Scripture Knowledge في ಕನ್ನಡ IRV.
‹“‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ› ‹ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು› ‹ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.›
‹“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ› ‹ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು› ‹ಕರ್ತನು ನನ್ನ ಒಡೆಯನಿಗೆ ನುಡಿದನು’› ‹ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.›
“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.
ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,
ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ
ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.
ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.