TSK

TSK · 1 ಪೇತ್ರನು 4:14

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.

ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.

ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.

ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.

ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.

‹ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.›

ಆಗ ಫರಿಸಾಯರು ಅವರಿಗೆ “ನೀವೂ ಸಹ ಆತನ ಮಾತಿಗೆ ಮರುಳಾದೀರಾ?

ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.

‹ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.›

ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,

ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.

ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.

ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.

ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.