¶ ಸಂಸೋನನು ತನ್ನ ತಂದೆತಾಯಿಗಳ ಸಹಿತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು.
TSK
TSK · 1 ಪೇತ್ರನು 5:8
مراجع Treasury of Scripture Knowledge في ಕನ್ನಡ IRV.
¶ ಒಂದು ದಿನ ದೇವದೂತರು ಯೆಹೋವನ ಸನ್ನಿಧಿಗೆ ಬರುವಾಗ ಸೈತಾನನು (ಆಪಾದಕ ದೂತನು) ಅವರ ಜೊತೆಯಲ್ಲಿ ಬಂದನು.
ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ.
ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ. ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ.
ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ.
ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ.
ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;
ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.
ಬೇಟೆಯ ಬಲಿ ಕಾಣದೇ ಸಿಂಹವು ಅರಣ್ಯದಲ್ಲಿ ಗರ್ಜಿಸುವುದೋ? ಏನನ್ನೂ ಬೇಟೆಯಾಡದೆ ಪ್ರಾಯದ ಸಿಂಹವು ಗವಿಯಲ್ಲಿ ಕುಳಿತು ಗುರುಗುಟ್ಟುವುದೋ?
¶ ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.
¶ ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.
‹ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.›
‹ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು›
‹ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,›
‹ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ”› ಅಂದನು.
‹ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.›
ಸೈತಾನನಿಗೆ ಅವಕಾಶಕೊಡಬೇಡಿರಿ.
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.
ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.
ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.
ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು,
ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ
ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,
¶ ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.
ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.
ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.
ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.