ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,
TSK
TSK · 1 ಸಮುವೇಲನು 12:21
مراجع Treasury of Scripture Knowledge في ಕನ್ನಡ IRV.
ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.
ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ. ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.
ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.
ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.
“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.
¶ ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.
ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”
ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.