TSK

TSK · 1 ಸಮುವೇಲನು 13:14

مراجع Treasury of Scripture Knowledge في ಕನ್ನಡ IRV.

العودة إلى المقطع

ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.

ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.

ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.

ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು

ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು.

“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.

ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.

ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.