¶ “ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.
TSK
TSK · 1 ಸಮುವೇಲನು 2:9
مراجع Treasury of Scripture Knowledge في ಕನ್ನಡ IRV.
ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.
ನಿನ್ನ ಗುಡಾರಕ್ಕೆ ಅಪಾಯವಿಲ್ಲವೆಂದು ನಿನಗೆ ಗೊತ್ತೇ ಇರುವುದು; ನಿನ್ನ ಹಟ್ಟಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ.
ಅವರನ್ನು ಒಟ್ಟಿಗೆ ಧೂಳಿನಲ್ಲಿ ಅಡಗಿಸಿ, ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು.
ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.
ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು.
ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.
ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.
ಯೆಹೋವನು ತನ್ನನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾನೆ, ಆದರೆ ಎಲ್ಲಾ ದುಷ್ಟರನ್ನು ಸಂಹರಿಸುತ್ತಾನೆ.
ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.
ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.
ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.
ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.
ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ!
‹ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು”› ಎಂದು ಹೇಳಿದನು.
¶ ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
¶ ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.