ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಆ ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?
TSK
TSK · 1 ಸಮುವೇಲನು 25:21
مراجع Treasury of Scripture Knowledge في ಕನ್ನಡ IRV.
ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ.
ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.
ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.
“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.