“ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ; ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.
TSK
TSK · 1 ಸಮುವೇಲನು 25:39
مراجع Treasury of Scripture Knowledge في ಕನ್ನಡ IRV.
ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.
ನಿನಗೆ ಕೇಡು ಮಾಡದಂತೆ ನನ್ನನ್ನು ತಡೆದ ಇಸ್ರಾಯೇಲರ ದೇವರಾದ ಯೆಹೋವನ ಆಣೆ, ನೀನು ಬೇಗನೇ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿರಲಿಲ್ಲ” ಎಂದು ಹೇಳಿದನು.
ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.
ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ.
ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.
ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.
ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.
ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
ಸ್ತನಬಾರದ ತಂಗಿಯು ನಮಗುಂಟು; ಅವಳನ್ನು ವರಿಸಲು ಯಾರಾದರು ಬಂದರೆ ಅವಳ ಹಿತಕ್ಕೆ ಏನು ಮಾಡೋಣ?
ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.
ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.
ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.