¶ ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.
TSK
TSK · 1 ಸಮುವೇಲನು 4:3
مراجع Treasury of Scripture Knowledge في ಕನ್ನಡ IRV.
‘ಯೆಹೋವನು ಈ ದೇಶಕ್ಕೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣವೇನಿದ್ದೀತು?’ ಎಂಬುದಾಗಿ ವಿಚಾರಿಸುವರು.
ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.
ಯೆಹೋಶುವನು “ಅಯ್ಯೋ, ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶ ಮಾಡಬೇಕೆಂದಿರುವಿಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು.
ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.
ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟಿದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯ ಹೊಗೆ ಏರುವುದೇಕೆ?
ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.
ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.
‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.
“ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.
¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.›
¶ ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.
ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.
¶ ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.