¶ ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.
TSK
TSK · 1 ಸಮುವೇಲನು 8:3
مراجع Treasury of Scripture Knowledge في ಕನ್ನಡ IRV.
¶ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.
¶ ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.
ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.
ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.
ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.
ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.