ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ.
TSK
TSK · 2 ಪೂರ್ವಕಾಲವೃತ್ತಾ 1:11
مراجع Treasury of Scripture Knowledge في ಕನ್ನಡ IRV.
ಆಗ ಯೆಹೋವನು ಅವನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೆ ಸರಿ. ಆದರೂ ನೀನು ಅದನ್ನು ಕಟ್ಟಬಾರದು.
ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.
ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.
ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.