ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.
TSK
TSK · 2 ಪೂರ್ವಕಾಲವೃತ್ತಾ 10:15
مراجع Treasury of Scripture Knowledge في ಕನ್ನಡ IRV.
ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
ಅವನು ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಾಯೇಲ್ ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು,
‘ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ’ ಎಂದು ಹೇಳಬೇಕು” ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.
¶ ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆಯ ಗ್ರಂಥ, ಹಾಗೂ ದಿವ್ಯದಾರ್ಶಿಕನಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.
ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.
ಯೆಹೋವನು ಅವರ ಅಂತರಾತ್ಮದಲ್ಲಿ ವಕ್ರಬುದ್ಧಿಯನ್ನು ಕಲ್ಪಸಿದ್ದಾನೆ. ಅಮಲೇರಿದವನು ಕಕ್ಕುತ್ತಾ ಓಡಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.
¶ ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.
ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು.
ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.