¶ ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.
TSK
TSK · 2 ಪೂರ್ವಕಾಲವೃತ್ತಾ 11:4
مراجع Treasury of Scripture Knowledge في ಕನ್ನಡ IRV.
¶ ಆಗ ಅಬ್ನೇರನು, “ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ” ಎಂದನು.
ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು
ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ.
ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.
¶ ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.
ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.