ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.
TSK
TSK · 2 ಪೂರ್ವಕಾಲವೃತ್ತಾ 12:7
مراجع Treasury of Scripture Knowledge في ಕನ್ನಡ IRV.
ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.
ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.
ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು
“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.
ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.
ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”
‹ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.›
¶ ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.