TSK

TSK · 2 ಪೂರ್ವಕಾಲವೃತ್ತಾ 13:12

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.

¶ ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ.

¶ ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.

ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.

ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಯೆಹೋವನ ಮಂಜೂಷದ ಮುಂದೆ ನಡೆದರು. ಯುದ್ಧ ಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಯೆಹೋವನ ಮಂಜೂಷದ ಹಿಂದಿತ್ತು. ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.

ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.

ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?

ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?

ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.

ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.

ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.

ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.

ಅವನು ನೆಲಕ್ಕೆ ಬಿದ್ದನು. ಆಗ, ‹“ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?”› ಎಂದು ಹೇಳುವ ವಾಣಿಯನ್ನು ಕೇಳಿದನು.

ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.