¶ ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲರು ಕಣ್ಣೆತ್ತಿ ತಮ್ಮ ಹಿಂದೆ ಹೊರಟು ಬಂದಿದ್ದ ಐಗುಪ್ತ್ಯರನ್ನು ಕಂಡು, ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.
TSK
TSK · 2 ಪೂರ್ವಕಾಲವೃತ್ತಾ 14:11
مراجع Treasury of Scripture Knowledge في ಕನ್ನಡ IRV.
ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.
ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.
ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು.
ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.
ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ.
ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.
ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತ್ತೂರಿಗಳನ್ನು ಊದಿದರು.
ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.
ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.
ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.
¶ ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.
ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.
ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.
ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.
ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;
ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.
ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.
ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,
¶ ‹“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.›
ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
ಅವನು ನೆಲಕ್ಕೆ ಬಿದ್ದನು. ಆಗ, ‹“ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?”› ಎಂದು ಹೇಳುವ ವಾಣಿಯನ್ನು ಕೇಳಿದನು.
ಅದಕ್ಕಾತನು, ‹“ನನ್ನ ಕೃಪೆಯೇ ನಿನಗೆ ಸಾಕು,›‹ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ”› ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.