ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
TSK
TSK · 2 ಪೂರ್ವಕಾಲವೃತ್ತಾ 14:4
مراجع Treasury of Scripture Knowledge في ಕನ್ನಡ IRV.
ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.
ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.
ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.
ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.
ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:
ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು.
ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.
ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!