ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.
TSK
TSK · 2 ಪೂರ್ವಕಾಲವೃತ್ತಾ 15:9
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.
¶ ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.
¶ ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.
ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.
¶ ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.